Advertisement

Accidental fire three cows died

11:13 AM Jul 16, 2022 | Team Udayavani |
ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು, ಮೂರು ದನಗಳು ಬೆಂಕಿಗಾಹುತಿಯಾಗಿರುವ ಘಟನೆ ತಾಲೂಕಿನ ಮುಳ್ಳೂರಿನಲ್ಲಿ ನಡೆದಿದೆ.ತಾಲೂಕಿನ ಗಾವಡಗೆರೆ ಹೋಬಳಿಯ ಮುಳ್ಳೂರು ಗ್ರಾಮದ ನಿವಾಸಿ ಜಯಮ್ಮ ಅವರಿಗೆ ಸೇರಿದ ಹಸುಗಳು ಸಾವನ್ನಪ್ಪಿದ್ದು, ಸುಮಾರು 3 ಲಕ್ಷರೂ ನಷ್ಟ ಸಂಭವಿಸಿದೆ. ಎಂದಿನಂತೆ ಸೊಳ್ಳೆಗಾಗಿ ಪಾತ್ರೆಯಲ್ಲಿ ಸ್ವಲ್ಪ ಬೆಂಕಿ ಹಾಕಿ ಮಲಗಿದ್ದರು. ಗಾಳಿಯಿಂದ ಬೆಂಕಿ ಕಿಡಿ ಕೊಟ್ಟಿಗೆಯ ಮೇಲ್ಛಾವಣಿಗೆ ಹಾರಿ ಬೆಂಕಿ ಹತ್ತಿಕೊಂಡಿದ್ದು. ಮನೆಯವರು ಎಚ್ಚರಗೊಳ್ಳುವಷ್ಟರಲ್ಲಿ ಬೆಂಕಿ ಇಡೀ ಕೊಟ್ಟಿಗೆಗೆ ವ್ಯಾಪಿಸಿದ್ದಲ್ಲದೆ, ಕೊಟ್ಟಿಗೆಯಲ್ಲಿದ್ದ ಹಸುಗಳು ಸಾವನ್ನಪ್ಪಿದೆ.
Advertisement

Udayavani is now on Telegram. Click here to join our channel and stay updated with the latest news.

Next