Advertisement

B. Y . Raghavendra

01:15 PM May 10, 2022 | Team Udayavani |
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದು, ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪಿಎಸ್‍ಐ ನೇಮಕಾತಿಯಲ್ಲಿನ ಆರೋಪಗಳು ಬೆಳಕಿಗೆ ಬರುತ್ತಿರಲಿಲ್ಲ. ಈ ವಿಷಯದಲ್ಲಿ ಸರ್ಕಾರ ದಿಟ್ಟ ನಿಲುವು ಕೈಗೊಂಡಿದ್ದು, ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ಪಟ್ಟಣದ ಶ್ರೀ ಮುರುಘಾಮಠದ ಆವರಣದಲ್ಲಿ ನಿರ್ಮಾಣವಾಗುತ್ತಿರುವ 2.5 ಕೋಟಿ ರೂ., ವೆಚ್ಚದ ಸಭಾ ಭವನದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಮರ್ಥವಾಗಿ ಆಡಳಿತ ನಡೆಸುತ್ತಿದೆ. ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪಗಳಿಗೆ ಸೂಕ್ತವಾದ ತನಿಖೆಯಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸರ್ಕಾರ ದಿಟ್ಟ ನಿಲುವು ಕೈಗೊಳ್ಳಲಿದೆ ಎಂದರು.
Advertisement

Udayavani is now on Telegram. Click here to join our channel and stay updated with the latest news.

Next