Advertisement

School Opening Ceremony

12:56 PM May 16, 2022 | Team Udayavani |
ಕಾಪು : ಮಜೂರು ಗ್ರಾಮದ ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ವಿಜ್ರಂಭಣೆಯಿಂದ ನಡೆಸಲಾಯಿತು.ರಜೆ ಮುಗಿಸಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ವಾದ್ಯ, ಬ್ಯಾಂಡ್, ಚೆಂಡೆ, ಕೊಂಬು ಸಹಿತ ವಾದ್ಯ ಘೋಷಗಳೊಂದಿಗೆ ಆರತಿ ಬೆಳಗಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೀಲಾಧರ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಪದ್ಮನಾಭ ಶ್ಯಾನುಭೋಗ್, ಮಜೂರು ಗ್ರಾ.ಪಂ ಅಧ್ಯಕ್ಷೆ ಶರ್ಮಿಳಾ ಆಚಾರ್ಯ, ಸದಸ್ಯ ಭಾಸ್ಕರ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯ ಆರ್.ಎಸ್. ಕಲ್ಲೂರ, ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ್ ಕುಮಾರ್ ಹೆಗ್ಡೆ, ಪ್ರಮುಖವರಾದ ಶಶಿಶೇಖರ ಭಟ್, ಕರೀಂ, ನಾಗಭೂಷಣ ರಾವ್ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಶಾಲೆಗೆ ಬರಮಾಡಿಕೊಂಡರು. ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳಿಂದ ಸುಣ್ಣ ಬಣ್ಣದ ಅಲಂಕಾರ ಮತ್ತು ಚಿತ್ರಗಳೊಂದಿಗೆ ಶೃಂಗಾರಗೊಂಡಿರುವ ಶಾಲಾವರಣ ಮತ್ತು ತರಗತಿ ಕೋಣೆ ಕೊಠಡಿಗಳನ್ನು ಕಂಡು ವಿದ್ಯಾರ್ಥಿಗಳು ಸಂಭ್ರಮಿಸಿದರು.
Advertisement

Udayavani is now on Telegram. Click here to join our channel and stay updated with the latest news.

Next